SRI SATHYA SAI LOKA SEVA TRUST, ALIKE

Alike Educational Institutions

+918255 298 236 | 239 236

ಕುಡಿಯುವ ನೀರು ಪೂರೈಸುವ ಕುರಿತು ಮುಖ್ಯಮಂತ್ರಿಗಳಿಗೆ ಮನವಿ

ಅಳಿಕೆ, ಕೇಪು, ಪೆರುವಾಯಿ ಗ್ರಾಮಗಳಿಗೆ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ನೀರು ಪೂರೈಸುವ ಕುರಿತು ಅನುದಾನ ಒದಗಿಸುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಗೃಹ ಕಛೇರಿ ಕಾವೇರಿಯಲ್ಲಿ ಮನವಿಯವನ್ನು ಸಲ್ಲಿಸಲಾಯಿತು. ಅಳಿಕೆ ವಿದ್ಯಾಸಂಸ್ಥೆಯ ವಿದ್ಯಾರ್ಥಿ ವೈಶಾಕ್ ಪಡಿಬಾಗಿಲು ಬಿಡಿಸಿದ ಮುಖ್ಯಮಂತ್ರಿಗಳ ಭಾವಚಿತ್ರವನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ಸಂಸ್ಥೆಯ ಅಧ್ಯಕ್ಷರಾದ ಯು. ಗಂಗಾಧರ ಭಟ್, ಬೆಂಗಳೂರು ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರು, ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷರಾದ ಡಾ|| ಬಿ.ಕೆ. ರವಿ , ಹೆಚ್. ರಮಾನಂದ, ಕೆ. ಗೋವಿಂದ ರಾವ್ ಮೊದಲಾದವರು ಉಪಸ್ಥಿತರಿದ್ದರು.