SRI SATHYA SAI LOKA SEVA TRUST, ALIKE

Alike Educational Institutions

+918255 298 236 | 239 236

ಹಿರಿಯ ಪ್ರಾಥಮಿಕ ಶಾಲೆಯ ಹೆತ್ತವರ ಸಮಾಲೋಚನಾ ಸಭೆ

ಹಿರಿಯ ಪ್ರಾಥಮಿಕ ಶಾಲೆಯ ಹೆತ್ತವರ ಸಮಾಲೋಚನಾ ಸಭೆ

ದಿನಾಂಕ : 28-07-2023
ಶ್ರೀ ಸತ್ಯಸಾಯಿ ಲೋಕಸೇವಾ ಹಿರಿಯ ಪ್ರಾಥಮಿಕ ಶಾಲೆ, ಅಳಿಕೆ ಇದರ ಮಕ್ಕಳ ಹೆತ್ತವರ ಸಮಾಲೋಚನಾ ಸಭೆಯು ಜರಗಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಉದನೇಶ್ವರ ಭಟ್ ಬಿ., ವಾರ್ಡನ್, ಶ್ರೀ ಸತ್ಯಸಾಯಿ ಲೋಕಸೇವಾ ಬಾಲಕುಟೀರ ಅಳಿಕೆ ಇವರು ಮಕ್ಕಳ ಗುಣ ನಡತೆ ಮತ್ತು ಕಲಿಕೆಯಲ್ಲಿ ಉತ್ತಮ ಅಂಕಗಳನ್ನು ಗಳಿಸುವಲ್ಲಿ ಹೆತ್ತವರ ಪಾತ್ರದ ಪ್ರಾಮುಖ್ಯತೆಯ ಬಗ್ಗೆ ಹೆತ್ತವರಿಗೆ ಅನೇಕ ನಿದರ್ಶನಗಳ ಮೂಲಕ ಮಾರ್ಗದರ್ಶನ ಮಾಡಿದರು. ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಕೆ.ಎಸ್. ಕೃಷ್ಣ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಎಸ್. ಚಂದ್ರಶೇಖರ ಭಟ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಹೆತ್ತವರಿಗೆ ಮಾರ್ಗದರ್ಶನ ನೀಡಿದರು. ಮಕ್ಕಳ ಹೆತ್ತವರಾದ ಶ್ರೀಮತಿ ಸಂಧ್ಯಾ ಮಡಿಯಾಲ, ಶ್ರೀಮತಿ ಅಮೃತ, ಬಾಲಕೃಷ್ಣ ಕಾರಂತ, ಕರೀಂ ಕುದ್ದುಪದವು ಅನಿಸಿಕೆಯಲ್ಲಿ ಶೈಕ್ಷಣಿಕ ಚಟುವಟಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅನುಲಾ ಬಿ. ರೈ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಈಶ್ವರ ನಾಯ್ಕ್ ಯಸ್. ಸ್ವಾಗತದೊಂದಿಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಂದ್ರ ರೈ ಶಿಕ್ಷಕ ಶಿಕ್ಷಕಿಯರನ್ನು ಪರಿಚಯಿಸಿ, ವಂದನಾರ್ಪಣೆಗೈದರು. ಶಿಕ್ಷಕರಾದ ಪ್ರವೀಣ್ ಶೆಟ್ಟಿ ನಿರೂಪಿಸಿದರು.